Select Page

Date: October 3, 2024

ದಿನಾಂಕ 02-10-2024 ರ ಬುಧವಾರದಂದು ನವಜೀವನ ಲೇ ಕೌನ್ಸೆಲರ್ ತರಬೇತಿ ಕಾರ್ಯಕ್ರಮದ 4ನೇ ಬ್ಯಾಚಿನ ಉದ್ಘಾಟನಾ ಸಮಾರಂಭವು ಡಾ. ಎ. ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ, ಉಡುಪಿ; ಕಮಲ್. ಎ. ಬಾಳಿಗಾ ಚ್ಯಾರಿಟೇಬಲ್ ಟ್ರಸ್ಟ್, ಮುಂಬೈ ಹಾಗೂ ಒನ್ ಗುಡ್ ಸ್ಟೆಪ್ ಇದರ ಜಂಟಿ ಆಶ್ರಯದಲ್ಲಿ ಡಾ. ಎ. ವಿ. ಬಾಳಿಗಾ ಸ್ಮಾರಕ ಆಸ್ಪತ್ರೆಯ ಕಮಲ್. ಎ. ಬಾಳಿಗಾ ಸಭಾಂಗಣದಲ್ಲಿ ನಡೆಯಿತು.
ಈ ಮಾಹಿತಿ ಕಾರ್ಯಗಾರವನ್ನು ಕೆ.‌ ಎಸ್. ಅಡಿಗ, ನಿವೃತ್ತ ಪ್ರಾಂಶುಪಾಲರು, ಉಡುಪಿ ಇವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ, ಉದ್ಘಾಟನಾ ಭಾಷಣ ನೆರವೇರಿಸಿ ಶುಭ ಹಾರೈಸಿದರು.
ಅತಿಥಿಗಳಾಗಿ ಶ್ರೀಮತಿ ಅಮಿತ ಪೈ, ಸಂಸ್ಥಾಪಕರು ಒನ್ ಗುಡ್ ಸ್ಟೆಪ್ ಹಾಗೂ ನಿವೃತ್ತ ಬ್ಯಾಂಕ್ ಉದ್ಯೋಗಿ ಹಾಗು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.‌ ಸಿ.‌ ಆರ್. ಚಂದ್ರಶೇಖರ್ ಅವರ ಸಮಾಧಾನ ಆಪ್ತಸಮಾಲೋಚನಾ ಕೇಂದ್ರದಲ್ಲಿ ಲೇ ಕೌನ್ಸೆಲಿಂಗ್ ತರಬೇತಿ ಪಡೆದ ಆಪ್ತಸಮಾಲೋಚಕರಾದ ಶ್ರೀ ರಾಘವೇಂದ್ರ ರಾವ್ ಭಾಗವಹಿಸಿದ್ದರು.
ಈ ಕಾರ್ಯಕ್ರಮದಲ್ಲಿ ಡಾ. ಎ. ವಿ. ಬಾಳಿಗ ಸ್ಮಾರಕ ಆಸ್ಪತ್ರೆ ಉಡುಪಿಯ ಮನೋವೈದ್ಯರಾದ ಡಾ. ವಿರೂಪಾಕ್ಷ ದೇವರಮನೆ, ಡಾ. ಮಾನಸ್ ಇ. ಆರ್. ಭಾಗವಹಿಸಿ ಶುಭ ಹಾರೈಸಿದರು.
ವೇದಿಕೆಯಲ್ಲಿ ಕಾರ್ಯಕ್ರಮದ ಸಂಯೋಜಕರು ಮತ್ತು ಆಸ್ಪತ್ರೆಯ ಆಡಳಿತಾಧಿಕಾರಿಯಾಗಿರುವ ಶ್ರೀಮತಿ ಸೌಜನ್ಯ ಶೆಟ್ಟಿ ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿಯ ಡಾ. ಎ. ವಿ. ಬಾಳಿಗಾ ಸಮೂಹ ಸಂಸ್ಥೆಗಳ ವೈದ್ಯಕೀಯ ನಿರ್ದೇಶಕರಾದ ಡಾ. ಪಿ. ವೆಂಕಟರಾಯ ಭಂಡಾರಿಯವರು ವಹಿಸಿದ್ದರು.
ಶ್ರೀ ಶಾಶ್ವತ್ ಇವರು ಕಾರ್ಯಕ್ರಮದಲ್ಲಿ ಪ್ರಾರ್ಥಿಸಿದರು.
ಶ್ರೀಮತಿ ಸೌಜನ್ಯ ಶೆಟ್ಟಿ ಇವರು ಕಾರ್ಯಕ್ರಮಕ್ಕೆ ಅತಿಥಿಗಳನ್ನು ಹಾಗೂ ಸರ್ವರನ್ನೂ ಸ್ವಾಗತಿಸಿದರು.
ಕುಮಾರಿ ರಕ್ಷಿತಾ, ಆಪ್ತ ಸಮಾಲೋಚಕರು, ಡಾ. ಎ. ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ, ಉಡುಪಿ ಇವರು ವಂದನಾರ್ಪಣೆ ಮಾಡಿದರು.
ಆಪ್ತ ಸಮಾಲೋಚಕರಾಗಿರುವ ಶ್ರೀಮತಿ ಸೌಮ್ಯರವರು ಕಾರ್ಯಕ್ರಮವನ್ನು ನಿರೂಪಿಸಿದರು.
ಸಭಾ ಕಾರ್ಯಕ್ರಮದ ನಂತರ ನವಜೀವನ ಲೇ ಕೌನ್ಸೆಲರ್ ತರಬೇತಿ ಕಾರ್ಯಗಾರದ ಪ್ರಥಮ ತರಗತಿಗಳು ನಡೆದುವು.
25 ಮಂದಿ ಕಲಿಕಾರ್ಥಿಗಳು ಈ ತರಬೇತಿಯ ಪ್ರಯೋಜನವನ್ನು ಪಡೆಯಲಿದ್ದಾರೆ.