Select Page

Date: April 18, 2023

ದಿನಾಂಕ 18-4-2023 ರಂದು ಡಾ. ಎ ವಿ ಬಾಳಿಗ ಸ್ಮಾರಕ ಆಸ್ಪತ್ರೆ ಉಡುಪಿ ಹಾಗೂ ಕಮಲ್ ಬಾಳಿಗಾ ಚಾರಿಟೇಬಲ್ ಟ್ರಸ್ಟ್ ಮುಂಬೈ ಇವರ ಜಂಟಿ ಆಶ್ರಯದಲ್ಲಿ ಕೌಟುಂಬಿಕ ಸಮಾಗಮ ಕಾರ್ಯಕ್ರಮವು ಜರುಗಿತು. ಕಾರ್ಯಕ್ರಮವನ್ನು ಡಾ. ಪ್ರವೀಣ್, ಮನೋವೈದ್ಯರು, ಆಸ್ಟ್ರೇಲಿಯಾ ಇವರು ಉದ್ಘಾಟಿಸಿದರು. ಆಸ್ಪತ್ರೆಯ ಮನೋವೈದ್ಯರಾದ ಡಾಕ್ಟರ್ ಪಿ ವಿ ಭಂಡಾರಿ ಇವರು ಅಧ್ಯಕ್ಷತೆ ವಹಿಸಿದ್ದರು ಹಾಗೂ ಆಸ್ಪತ್ರೆಯ ಮನೋವೈದ್ಯರುಗಳಾದ ಡಾ. ವಿರೂಪಾಕ್ಷ ದೇವರಮನೆ, ಡಾ. ಮಾನಸ್ ಇ ಆರ್ ಹಾಗೂ ಡಾ. ದೀಪಕ್ ಮಲ್ಯ ಇವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಮಧ್ಯ ವ್ಯಸನದಿಂದ ಸಂಪೂರ್ಣವಾಗಿ ವಿಮುಕ್ತಿ ಹೊಂದಿದ ಇಬ್ಬರು ಸದಸ್ಯರುಗಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಮಧ್ಯವ್ಯಸನದಿಂದಾಗುವ ಮಾನಸಿಕ ಮತ್ತು ದೈಹಿಕ ದುಷ್ಪರಿಣಾಮಗಳ ಬಗ್ಗೆ ಮತ್ತು ಮಧ್ಯಪಾನದ ಬಗ್ಗೆ ಇರುವ ನಂಬಿಕೆಗಳು ಮತ್ತು ಅಪನಂಬಿಕೆಗಳ ಬಗ್ಗೆ ಮನೋವೈದ್ಯರುಗಳು ಸದಸ್ಯರುಗಳಿಗೆ ಮಾಹಿತಿಯನ್ನು ನೀಡಿದರು. ಶ್ರೀಮತಿ ಪೂರ್ಣಿಮಾ ಇವರು ಪ್ರಾರ್ಥಿಸಿದರು .ಶ್ರೀಮತಿ ಸೌಜನ್ಯ ಶೆಟ್ಟಿ ಇವರು ಸ್ವಾಗತಿಸಿದರು, ಶ್ರೀಮತಿ ದೀಪಶ್ರೀ ಇವರು ಕಾರ್ಯಕ್ರಮವನ್ನು ನಿರೂಪಿಸಿದರು ಹಾಗೂ ಮನಶಾಸ್ತ್ರಜ್ಞರಾದ ಶ್ರೀ ನಾಗರಾಜ್ ಮೂರ್ತಿ ಇವರು ಧನ್ಯವಾದ ಸಮರ್ಪಿಸಿದರು. ಕಾರ್ಯಕ್ರಮದ ನಂತರ ಬಂದ ಅಭ್ಯರ್ಥಿಗಳಿಗೆ ಗುಂಪು ಚಿಕಿತ್ಸೆ, ಆಟೋಟ ಸ್ಪರ್ಧೆಗಳು ಹಾಗೂ ಮನೋರಂಜನ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು.