Select Page

Date: May 31, 2025

ದಿನಾಂಕ 31-05-2025 ರ ಶನಿವಾರದಂದು ವಿಶ್ವ ತಂಬಾಕು ರಹಿತ ದಿನಾಚರಣೆಯ ಅಂಗವಾಗಿ ಡಾ. ಎ. ವಿ. ಬಾಳಿಗ ಸ್ಮಾರಕ ಆಸ್ಪತ್ರೆ, ಉಡುಪಿ ಮತ್ತು ಕಮಲ್. ಎ. ಬಾಳಿಗ ಚಾರಿಟೇಬಲ್ ಟ್ರಸ್ಟ್, ಮುಂಬೈ ಹಾಗೂ ಭಾರತೀಯ ವೈದ್ಯಕೀಯ ಸಂಘ, ಉಡುಪಿ-ಕರಾವಳಿ ಇದರ ಜಂಟಿ ಆಶ್ರಯದಲ್ಲಿ ಒಂದು ದಿನದ ಮಾಹಿತಿ ಕಾರ್ಯಗಾರವು ಡಾ. ಎ. ವಿ. ಬಾಳಿಗ ಸ್ಮಾರಕ ಆಸ್ಪತ್ರೆಯ ಕಮಲ್. ಎ. ಬಾಳಿಗ ಸಭಾಂಗಣದಲ್ಲಿ ನಡೆಯಿತು. ಈ ಮಾಹಿತಿ ಕಾರ್ಯಗಾರವನ್ನು Dr. ಸುರೇಶ್ ಶೆಣೈ ಆರ್ಥೋಪೆಡಿಕ್ ಸರ್ಜನ್, ಪ್ರೆಸಿಡೆಂಟ್ I.M.A ಉಡುಪಿ – ಕರಾವಳಿ, ಇವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ, ಉದ್ಘಾಟನಾ ಭಾಷಣವನ್ನು ಮಾಡಿದರು, ಅತಿಥಿಗಳಾಗಿ Dr. ರಾಮಪ್ರಸಾದ್, V.P. ಪ್ರೊಫೆಸರ್ ಮತ್ತು ಹೆಡ್ ಡಿಪಾರ್ಟ್ಮೆಂಟ್ ಆಫ್ ಪಬ್ಲಿಕ್ ಹೆಲ್ತ್, ಡೆಂಟಿಸ್ಟ್ರಿ, ಮಣಿಪಾಲ ಕಾಲೇಜ್ ಆಫ್ ಡೆಂಟಲ್ ಸೈನ್ಸ್ ಮಣಿಪಾಲ, ಮತ್ತು Dr. ಸ್ವಾತಿ ಶೋರಿ ಸಹಾಯಕ ಪ್ರಾಧ್ಯಾಪಕಿ MCODS, ಮಣಿಪಾಲ್ ಇವರು ಉಪಸ್ಥಿತರಿದ್ದು, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಡಾ. ಪಿ.ವಿ. ಭಂಡಾರಿ ವೈದ್ಯಕೀಯ ನಿರ್ದೇಶಕರು ಡಾಕ್ಟರ್ ಎ.ವಿ. ಬಾಳಿಗ ಆಸ್ಪತ್ರೆ, ಉಡುಪಿ ಇವರು ವಹಿಸಿದ್ದರು. ವೇದಿಕೆಯಲ್ಲಿ ಆಸ್ಪತ್ರೆಯ ಮನೋವೈದ್ಯರಾಗಿರುವಂತಹ Dr. ದೀಪಕ್ ಮಲ್ಯ, Dr. ಮಾನಸ್ E.R, Dr. ರಶ್ಮಿ, ಡೆಂಟಲ್ ಸರ್ಜನ್ , Dr. ಸ್ವಪ್ನ, ಆಸ್ಪತ್ರೆಯ ಆಯುರ್ವೇದಿಕ್ ವೈದ್ಯಾಧಿಕಾರಿ Dr. ಸುನಿಲ್ ಉಪಸ್ಥಿತರಿದ್ದು, ಕಾರ್ಯಕ್ರಮಕ್ಕೆ ಶುಭ ಹಾರೈಸಿದ್ದರು. ಶ್ರೀಮತಿ ಪದ್ಮ ರಾಘವೇಂದ್ರ ಕಾರ್ಯಕ್ರಮಕ್ಕೆ ಪ್ರಾರ್ಥಿಸಿದರು, ಆಸ್ಪತ್ರೆಯ ನರ್ಸಿಂಗ್ ಮೇಲ್ವಿಚಾರಕಿ ಶ್ರೀಮತಿ ಪ್ರಮೀಳಾ ಡಿಸೋಜಾ ಇವರು ಸ್ವಾಗತಿಸಿದರು, ಸಮುದಾಯ ಸಾಮಾಜಿಕ ಕಾರ್ಯಕರ್ತ ಸುರೇಶ್ ನಾವೂರು ವಂದನಾರ್ಪಣೆ ಮಾಡಿದರು. ಆಪ್ತ ಸಮಾಲೋಚಕಿಯಾಗಿರುವ ಶ್ರೀಮತಿ ಸೌಮ್ಯ ಕಾರ್ಯಕ್ರಮವನ್ನು ನಿರೂಪಿಸಿದರು. ಸಭಾ ಕಾರ್ಯಕ್ರಮದ ನಂತರ MCODS, Manipal ಇಲ್ಲಿಯ ವಿದ್ಯಾರ್ಥಿಗಳು ತಂಬಾಕು ದುಷ್ಪರಿಣಾಮಗಳ ಕುರಿತು ಪಾತ್ರಾಭಿನಯ ನೆರವೇರಿಸಿದರು. ನಂತರ ತಂಬಾಕಿನ ದುಷ್ಪರಿಣಾಮಗಳ ಬಗ್ಗೆ ವೈದ್ಯರುಗಳಿಂದ ಮಾಹಿತಿ ಕಾರ್ಯಗಾರ ನಡೆಯಿತು. ಮುಡಿಪು ಸರಕಾರಿ ಪ್ರಥಮ ದರ್ಜೆ ಕಾಲೇಜು, ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜು, ಹಿರಿಯಡ್ಕ ಸರಕಾರಿ ಪ್ರಥಮ ದರ್ಜೆ ಕಾಲೇಜು, ತೆಂಕನೆಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು, ಮಿತ್ರ ಸ್ಕೂಲ್ ಆಫ್ ನರ್ಸಿಂಗ್ ನ ವಿದ್ಯಾರ್ಥಿಗಳು, ಕಾರ್ಕಳ ಭುವನೇಂದ್ರ ಕಾಲೇಜ್ ವಿದ್ಯಾರ್ಥಿಗಳು ಮತ್ತು ಉಡುಪಿ ವೈಕುಂಠ ಬಾಳಿಗ ಕಾನೂನು ಕಾಲೇಜು ವಿದ್ಯಾರ್ಥಿಗಳು ಈ ಮಾಹಿತಿ ಕಾರ್ಯಕ್ರಮದ ಪ್ರಯೋಜನವನ್ನು ಪಡೆದರು